July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪ ನಿರೀಕ್ಷಕರಾದ ಮುರಳೀಧರ್ ಕೆ.ಜಿ ಅವರು ಹಾಗೂ ತಂಡ ದಾಳಿ ನಡೆಸಿದ್ದು ಈ ವೇಳೆ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಪಿಕಪ್ ವಾಹನವನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಲೇಡಿ ಜೆಸಿ ಮತ್ತು ಜೂನಿಯರ್ ಸಮ್ಮೇಳನ: ಜೆಸಿಐ ಉಜಿರೆ ಸಿಟಿ ಘಟಕಕ್ಕೆ ವಲಯದ ಅತ್ಯುತ್ತಮ ಲೇಡಿ ಜೆಸಿ ವಿಂಗ್ ರನ್ನರ್ ಅಪ್ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ಗೌರವ ಮನ್ನಣೆಗಳು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!