25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪ ನಿರೀಕ್ಷಕರಾದ ಮುರಳೀಧರ್ ಕೆ.ಜಿ ಅವರು ಹಾಗೂ ತಂಡ ದಾಳಿ ನಡೆಸಿದ್ದು ಈ ವೇಳೆ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಪಿಕಪ್ ವಾಹನವನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya
error: Content is protected !!