ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಕನ್ಯಾಡಿ: ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ದಕ್ಷಿಣದ ಅಯೋಧ್ಯೆ ಎಂದೆನಿಸಿದ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವವು ಎ.10 ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ.

ಇಂದು ಬೆಳಿಗ್ಗೆ ವಾರ್ಷಿಕ ಪ್ರತಿಷ್ಠಾ ಮಹೋತ್ಸವದ ವೈದಿಕ ಕಾರ್ಯಕ್ರಮಗಳು ನಡೆಯಿತು .ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀರಾಮನಾಮ ಸಪ್ತಾಹದ ಅಖಂಡ ನಂದಾದೀಪವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಎಸಿ ರಾಜು ಬೆಂಗಳೂರು,
ಸಾರಿಗೆ ಅಧಿಕಾರಿ ಚರಣ್ ಕುಮಾರ್ ಕುರ್ತೋಡಿ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಕೋಟ್ಯಾನ್, ನಿವೃತ ಬಿಎಸ್ಎನ್ ಎಲ್ ಅಧಿಕಾರಿ ಅಣ್ಣಿ ಪೂಜಾರಿ, ಉದ್ಯಮಿ ರವಿ ಪೂಜಾರಿ‌ ಆರ್ಲ,ಪ್ರಮುಖರಾದ ಕೃಷ್ಣಪ್ಪ ಪೂಜಾರಿ,ಪ್ರಶಾಂತ್ ಎಂ ಪಾರೆಂಕಿ, ಸುನೀಲ್ ಕನ್ಯಾಡಿ, ಸಚಿನ್ ಗೌಡ ಕಲ್ಮಂಜ, ಸುಜಾತ ಅಣ್ಣಿ ಪೂಜಾರಿ,ತುಕರಾಮ್ ಪೂಜಾರಿ, ಪುರುಷೋತ್ತಮ ಪೂಜಾರಿ,ಸುಂದರ ಹೆಗ್ಡೆ ವೇಣೂರು, ವಿನಿತ್ ಕೋಟ್ಯಾನ್,ಹರೀಶ್ ಸುವರ್ಣ ಕನ್ಯಾಡಿ, ಓಬು ಪೂಜಾರಿ ಉಡುಪಿ,ಅನಂತ್ ರಾಮ್ ರಾವ್ ಚಾರ್ಮಾಡಿ, ಕೃಷ್ಣಪ್ಪ ಗುಡಿಗಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Comment

error: Content is protected !!