23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಉಜಿರೆ ಅನುಗ್ರಹ ಪ್ರೈಮರಿ ಶಾಲೆ ಸಭಾಂಗಣದಲ್ಲಿ ಎ.10 ರಿಂದ 19 ರ ವರೆಗೆ ನಡೆಯಲಿದೆ

ಕಾರ್ಯಕ್ರಮವನ್ನು ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವ.ಫಾ.ಜೇಮ್ಸ್ ಡಿಸೋಜಾ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು..

ಮುಖ್ಯ ಅತಿಥಿಗಳಾಗಿ ಅಗಮಿಸಿದ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ವ.ಫಾ.ವಿಜಯ್ ಲೋಬೋ ರವರು ಬೇಸಿಗೆ ಶಿಬಿರಕ್ಕೆ ಆಗಮಿಸಿದ ಮಕ್ಕಳಿಗೆ ಶುಭಹಾರೈಸಿದರು.

ಮಹಿಳಾ ಮಂಡಲದ ಸದಸ್ಯೆ ಮಮತ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿದರು. ಭವ್ಯಶ್ರೀ ನಿರೂಪಿಸಿ, ಗಾಯತ್ರಿ ಶ್ರೀಧರ್ ರವರ ಧನ್ಯವಾದವಿತ್ತರು. ಮಹಿಳಾ ಮಂಡಲದ ಸದಸ್ಯರು, ಶಿಬಿರಾರ್ಥಿಗಳು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya
error: Content is protected !!