28 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

ಧರ್ಮಸ್ಥಳ: ಒತ್ತಡಮುಕ್ತ ಜೀವನಕ್ಕೆ ಸಂಗೀತ ಮತ್ತು ನೃತ್ಯ ಕಲೆ ಪೂರಕ ಹಾಗೂ ಪ್ರೇರಕವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.


ಅವರು ಎ.10 ರಂದು ಧರ್ಮಸ್ಥಳದಲ್ಲಿ “ಮಹೋತ್ಸವ” ಸಭಾಭವನದಲ್ಲಿ ಧರ್ಮಸ್ಥಳದ ಜೋಡುಸ್ಥಾನದಲ್ಲಿರುವ ಗೀತನೃತ್ಯಾಲಯದ ನೃತ್ಯೋತ್ಸವ ಮತ್ತು ಗುರುವಂದನೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕೇವಲ ಸಂಪಾದನೆಗಾಗಿ ಯಾವುದೇ ವಿದ್ಯೆ ಮತ್ತು ಕಲೆಯನ್ನು ಕಲಿಯಬಾರದು. ಇಂದಿನ ಒತ್ತಡದ ಬದುಕಿನಲ್ಲಿ ಒತ್ತಡಮುಕ್ತ ಜೀವನ ಮಾಡಲು ಬಾಲ್ಯದಲ್ಲೆ ಸಂಗೀತ, ಭರತನಾಟ್ಯ ಮೊದಲಾದ ಕಲೆಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ನೃತ್ಯ ನೋಡಿ ಆನಂದಿಸಲು ಸುಲಭ. ಆದರೆ ಕಲಿಯಲು ಕಷ್ಟ. ಭರತನಾಟ್ಯದ ಮೂಲಗುರು ಭರತಮುನಿಗಳಾಗಿದ್ದು, ಭರತನಾಟ್ಯ ವಿಶ್ವಮಾನ್ಯತೆ ಪಡೆದಿದೆ. ನೃತ್ಯ ಮಾಡುವಾಗ ಭಾವಾಭಿನಯದಿಂದ ಹಾಡನ್ನು ಅನುಭವಿಸಿಕೊಂಡು ನಾಟ್ಯ ಮಾಡಬೇಕು ಎಂದು ಅವರು ಸಲಹೆ ನೀಡಿದರು.


ಟಿ.ವಿ., ಮೊಬೈಲ್‌ಫೋನ್‌ನಿಂದ ದೂರವಿದ್ದು ಸಂಗೀತ, ನೃತ್ಯ ಮೊದಲಾದ ಹವ್ಯಾಸಗಳನ್ನು ಬೆಳೆಸಿಕೊಂಡಾಗ ಸಾರ್ಥಕ ಜೀವನ ನಡೆಸಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಮಂಗಳೂರಿನ ಕದ್ರಿ ನೃತ್ಯ ಭಾರತಿಯ ಗೀತಾ ಸರಳಾಯ ಸಮಾರಂಭ ಉದ್ಘಾಟಿಸಿದರು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡಿದರು. ವಿದುಷಿ ಕುಮಾರಿ ಚೈತ್ರಾ ತನ್ನ ಗುರುಗಳಾದ ಉಜಿರೆಯ ಶಾಂತ ಪಡ್ವೆಟ್ನಾಯರಿಗೆ “ನೃತ್ಯದೀಪ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಗೀತನೃತ್ಯಾಲಯದ ೩೮ ಮಂದಿ ವಿದ್ಯಾರ್ಥಿನಿಯರು ಆಕರ್ಷಕ ನೃತ್ಯ ಪ್ರದರ್ಶನ ನೀಡಿದರು.
ವಿದುಷಿ ಕುಮಾರಿ ಚೈತ್ರಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಶಶಿಕಲ ಧನ್ಯವಾದವಿತ್ತರು. ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

Related posts

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya
error: Content is protected !!