July 23, 2026
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!