September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ.

ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10 ರಂದು ಸಂಜೆ, ಮಹಮ್ಮದ್ ರವರ ಬಾಬ್ತು KA 70-5972 ನೇ ಆಟೋ ರಿಕ್ಷಾದಲ್ಲಿ ಸಹ ಪ್ರಯಾಣಿಕರನ್ನಾಗಿ, ಸಲೀಂ ಹಾಗೂ ಅವರ ಮಕ್ಕಳಾದ ಮೊಹಮ್ಮದ್‌ ಶಯಾನ್‌(8), ರಿಫ್ನಾ (6) ಎಂಬವರನ್ನು ಕುಳ್ಳಿರಿಸಿಕೊಂಡು, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಾಯಿಸಿಕೊಂಡು ಬರುತ್ತಾ, ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ ತಲುಪುತ್ತಿದ್ದಂತೆ, ಮಹಮ್ಮದ್ ವಿರುದ್ದ ದಿಕ್ಕಿನಿಂದ KA 18 Z 3143 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ, ಮಹಮ್ಮದ್ ರವರ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಮಹಮ್ಮದ್, ಸಲೀಂರವರಿಗೆ, ಮಗು ಮೊಹಮ್ಮದ್‌ ಶಯಾನ್‌ ರವರುಗಳಿಗೆ ಗಾಯಗಳಾಗಿರುತ್ತದೆ.

ಗಾಯಾಳುಗಳು ಗುರುವಾಯನಕೆರೆ ಆಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ, ಈ ಪೈಕಿ ಗಾಯಾಳು ಮೊಹಮ್ಮದ್‌ ಶಯಾನ್‌ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya
error: Content is protected !!