23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ.

ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10 ರಂದು ಸಂಜೆ, ಮಹಮ್ಮದ್ ರವರ ಬಾಬ್ತು KA 70-5972 ನೇ ಆಟೋ ರಿಕ್ಷಾದಲ್ಲಿ ಸಹ ಪ್ರಯಾಣಿಕರನ್ನಾಗಿ, ಸಲೀಂ ಹಾಗೂ ಅವರ ಮಕ್ಕಳಾದ ಮೊಹಮ್ಮದ್‌ ಶಯಾನ್‌(8), ರಿಫ್ನಾ (6) ಎಂಬವರನ್ನು ಕುಳ್ಳಿರಿಸಿಕೊಂಡು, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಾಯಿಸಿಕೊಂಡು ಬರುತ್ತಾ, ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ ತಲುಪುತ್ತಿದ್ದಂತೆ, ಮಹಮ್ಮದ್ ವಿರುದ್ದ ದಿಕ್ಕಿನಿಂದ KA 18 Z 3143 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ, ಮಹಮ್ಮದ್ ರವರ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಮಹಮ್ಮದ್, ಸಲೀಂರವರಿಗೆ, ಮಗು ಮೊಹಮ್ಮದ್‌ ಶಯಾನ್‌ ರವರುಗಳಿಗೆ ಗಾಯಗಳಾಗಿರುತ್ತದೆ.

ಗಾಯಾಳುಗಳು ಗುರುವಾಯನಕೆರೆ ಆಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ, ಈ ಪೈಕಿ ಗಾಯಾಳು ಮೊಹಮ್ಮದ್‌ ಶಯಾನ್‌ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya
error: Content is protected !!