22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ.

ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10 ರಂದು ಸಂಜೆ, ಮಹಮ್ಮದ್ ರವರ ಬಾಬ್ತು KA 70-5972 ನೇ ಆಟೋ ರಿಕ್ಷಾದಲ್ಲಿ ಸಹ ಪ್ರಯಾಣಿಕರನ್ನಾಗಿ, ಸಲೀಂ ಹಾಗೂ ಅವರ ಮಕ್ಕಳಾದ ಮೊಹಮ್ಮದ್‌ ಶಯಾನ್‌(8), ರಿಫ್ನಾ (6) ಎಂಬವರನ್ನು ಕುಳ್ಳಿರಿಸಿಕೊಂಡು, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಾಯಿಸಿಕೊಂಡು ಬರುತ್ತಾ, ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ ತಲುಪುತ್ತಿದ್ದಂತೆ, ಮಹಮ್ಮದ್ ವಿರುದ್ದ ದಿಕ್ಕಿನಿಂದ KA 18 Z 3143 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ, ಮಹಮ್ಮದ್ ರವರ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಮಹಮ್ಮದ್, ಸಲೀಂರವರಿಗೆ, ಮಗು ಮೊಹಮ್ಮದ್‌ ಶಯಾನ್‌ ರವರುಗಳಿಗೆ ಗಾಯಗಳಾಗಿರುತ್ತದೆ.

ಗಾಯಾಳುಗಳು ಗುರುವಾಯನಕೆರೆ ಆಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ, ಈ ಪೈಕಿ ಗಾಯಾಳು ಮೊಹಮ್ಮದ್‌ ಶಯಾನ್‌ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!