April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

ಗೇರುಕಟ್ಟೆ ಸಮೀಪದ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬದ ಸಾಮೂಹಿಕ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ಭಾಷಣ ಮಾಡಿದರು.

ಖತೀಬರಾದ ತಾಜುದ್ದೀನ್ ಸಖಾಫಿರವರನ್ನು ಬೀಳ್ಕೊಡುಗೆ:

ಕಳೆದ ಮೂರು ವರ್ಷಗಳಿಂದ ಪರಪ್ಪು ಮಸೀದಿಯಲ್ಲಿ ಖತೀಬರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದ ತಾಜುದ್ದೀನ್ ಸಖಾಫಿ ಮದರಸ ಮಕ್ಕಳ ವಿದ್ಯಾಭ್ಯಾಸದಲ್ಲಿ ರೇಂಜ್ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಫಲಿತಾಂಶ ಬರಲು ಹಾಗೂ ಮದರಸ ಮಕ್ಕಳ ಪ್ರತಿಭೋತ್ಸವದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆಯಲು ಕೂಡಾ ಕಾರಣಕರ್ತರಾಗಿದ್ದರು.


ಇವರು ಬೇರೆ ಕಡೆ ಉದ್ಯೋಗಕ್ಕಾಗಿ ಹೋಗುವವರಾದ್ದರಿಂದ ಈದುಲ್ ಫಿತರ್ ನ ದಿನದಂದು ಆಡಳಿತ ಸಮಿತಿ ಮತ್ತು ಜಮಾಅತರಿಂದ ಗೌರವಾರ್ಪಣೆಯ ಮೂಲಕ ಬೀಳ್ಕೊಡಲಾಯಿತು.


ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ,ಸಿದ್ದೀಕ್ ಮುಈನಿ, ಅಬ್ಬಾಸ್ ಹಿಶಮಿ,ಇಕ್ಬಾಲ್ ಮರ್ಝಾಕಿ, ಸಿದ್ದೀಕ್ ಸಖಾಫಿ , ಖಾದರ್ ಹಾಜಿ,ಅಬ್ದುಲ್ ಕರೀಮ್, ಖಾದರ್ ಟಿಂಬರ್, ಬಶೀರ್ ಟಿಂಬರ್,ಇಸುಬು ಎಂ.ಕೆ., ಮಹ್ಮದ್ ಎನ್.ಎನ್, ಹಾರಿಶ್ ಎನ್.ಎ, ಅಬ್ಬಾಸ್, ಬಿ.ಎಂ. ಆದಂ ಹಾಜಿ, ಹನೀಫ್ ಬಿ.ಐ., ಆಸಿಫ್.ಎಸ್.ಯು, ಅಬೂಸಾಲಿಹ್ ,ಸಿದ್ದೀಕ್ , ಸೈಫುಲ್ಲಾ, ಹಾಗೂ ಇನ್ನೂ ಅನೇಕ ಮುಖಂಡರು, ಉಸ್ತಾದರುಗಳು ಮೊದಲಾದವರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya
error: Content is protected !!