September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

ಗೇರುಕಟ್ಟೆ ಸಮೀಪದ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬದ ಸಾಮೂಹಿಕ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ಭಾಷಣ ಮಾಡಿದರು.

ಖತೀಬರಾದ ತಾಜುದ್ದೀನ್ ಸಖಾಫಿರವರನ್ನು ಬೀಳ್ಕೊಡುಗೆ:

ಕಳೆದ ಮೂರು ವರ್ಷಗಳಿಂದ ಪರಪ್ಪು ಮಸೀದಿಯಲ್ಲಿ ಖತೀಬರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದ ತಾಜುದ್ದೀನ್ ಸಖಾಫಿ ಮದರಸ ಮಕ್ಕಳ ವಿದ್ಯಾಭ್ಯಾಸದಲ್ಲಿ ರೇಂಜ್ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಫಲಿತಾಂಶ ಬರಲು ಹಾಗೂ ಮದರಸ ಮಕ್ಕಳ ಪ್ರತಿಭೋತ್ಸವದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆಯಲು ಕೂಡಾ ಕಾರಣಕರ್ತರಾಗಿದ್ದರು.


ಇವರು ಬೇರೆ ಕಡೆ ಉದ್ಯೋಗಕ್ಕಾಗಿ ಹೋಗುವವರಾದ್ದರಿಂದ ಈದುಲ್ ಫಿತರ್ ನ ದಿನದಂದು ಆಡಳಿತ ಸಮಿತಿ ಮತ್ತು ಜಮಾಅತರಿಂದ ಗೌರವಾರ್ಪಣೆಯ ಮೂಲಕ ಬೀಳ್ಕೊಡಲಾಯಿತು.


ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ,ಸಿದ್ದೀಕ್ ಮುಈನಿ, ಅಬ್ಬಾಸ್ ಹಿಶಮಿ,ಇಕ್ಬಾಲ್ ಮರ್ಝಾಕಿ, ಸಿದ್ದೀಕ್ ಸಖಾಫಿ , ಖಾದರ್ ಹಾಜಿ,ಅಬ್ದುಲ್ ಕರೀಮ್, ಖಾದರ್ ಟಿಂಬರ್, ಬಶೀರ್ ಟಿಂಬರ್,ಇಸುಬು ಎಂ.ಕೆ., ಮಹ್ಮದ್ ಎನ್.ಎನ್, ಹಾರಿಶ್ ಎನ್.ಎ, ಅಬ್ಬಾಸ್, ಬಿ.ಎಂ. ಆದಂ ಹಾಜಿ, ಹನೀಫ್ ಬಿ.ಐ., ಆಸಿಫ್.ಎಸ್.ಯು, ಅಬೂಸಾಲಿಹ್ ,ಸಿದ್ದೀಕ್ , ಸೈಫುಲ್ಲಾ, ಹಾಗೂ ಇನ್ನೂ ಅನೇಕ ಮುಖಂಡರು, ಉಸ್ತಾದರುಗಳು ಮೊದಲಾದವರಿದ್ದರು.

Related posts

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ: ಅಝರ್ ನಾವೂರು

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!