August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

ಧರ್ಮಸ್ಥಳ: ಒತ್ತಡಮುಕ್ತ ಜೀವನಕ್ಕೆ ಸಂಗೀತ ಮತ್ತು ನೃತ್ಯ ಕಲೆ ಪೂರಕ ಹಾಗೂ ಪ್ರೇರಕವಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.


ಅವರು ಎ.10 ರಂದು ಧರ್ಮಸ್ಥಳದಲ್ಲಿ “ಮಹೋತ್ಸವ” ಸಭಾಭವನದಲ್ಲಿ ಧರ್ಮಸ್ಥಳದ ಜೋಡುಸ್ಥಾನದಲ್ಲಿರುವ ಗೀತನೃತ್ಯಾಲಯದ ನೃತ್ಯೋತ್ಸವ ಮತ್ತು ಗುರುವಂದನೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಕೇವಲ ಸಂಪಾದನೆಗಾಗಿ ಯಾವುದೇ ವಿದ್ಯೆ ಮತ್ತು ಕಲೆಯನ್ನು ಕಲಿಯಬಾರದು. ಇಂದಿನ ಒತ್ತಡದ ಬದುಕಿನಲ್ಲಿ ಒತ್ತಡಮುಕ್ತ ಜೀವನ ಮಾಡಲು ಬಾಲ್ಯದಲ್ಲೆ ಸಂಗೀತ, ಭರತನಾಟ್ಯ ಮೊದಲಾದ ಕಲೆಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ನೃತ್ಯ ನೋಡಿ ಆನಂದಿಸಲು ಸುಲಭ. ಆದರೆ ಕಲಿಯಲು ಕಷ್ಟ. ಭರತನಾಟ್ಯದ ಮೂಲಗುರು ಭರತಮುನಿಗಳಾಗಿದ್ದು, ಭರತನಾಟ್ಯ ವಿಶ್ವಮಾನ್ಯತೆ ಪಡೆದಿದೆ. ನೃತ್ಯ ಮಾಡುವಾಗ ಭಾವಾಭಿನಯದಿಂದ ಹಾಡನ್ನು ಅನುಭವಿಸಿಕೊಂಡು ನಾಟ್ಯ ಮಾಡಬೇಕು ಎಂದು ಅವರು ಸಲಹೆ ನೀಡಿದರು.


ಟಿ.ವಿ., ಮೊಬೈಲ್‌ಫೋನ್‌ನಿಂದ ದೂರವಿದ್ದು ಸಂಗೀತ, ನೃತ್ಯ ಮೊದಲಾದ ಹವ್ಯಾಸಗಳನ್ನು ಬೆಳೆಸಿಕೊಂಡಾಗ ಸಾರ್ಥಕ ಜೀವನ ನಡೆಸಬಹುದು ಎಂದು ಅವರು ಅಭಿಪ್ರಾಯಪಟ್ಟರು.


ಮಂಗಳೂರಿನ ಕದ್ರಿ ನೃತ್ಯ ಭಾರತಿಯ ಗೀತಾ ಸರಳಾಯ ಸಮಾರಂಭ ಉದ್ಘಾಟಿಸಿದರು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡಿದರು. ವಿದುಷಿ ಕುಮಾರಿ ಚೈತ್ರಾ ತನ್ನ ಗುರುಗಳಾದ ಉಜಿರೆಯ ಶಾಂತ ಪಡ್ವೆಟ್ನಾಯರಿಗೆ “ನೃತ್ಯದೀಪ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಗೀತನೃತ್ಯಾಲಯದ ೩೮ ಮಂದಿ ವಿದ್ಯಾರ್ಥಿನಿಯರು ಆಕರ್ಷಕ ನೃತ್ಯ ಪ್ರದರ್ಶನ ನೀಡಿದರು.
ವಿದುಷಿ ಕುಮಾರಿ ಚೈತ್ರಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಶಶಿಕಲ ಧನ್ಯವಾದವಿತ್ತರು. ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!