31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya
error: Content is protected !!