24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya
error: Content is protected !!