September 6, 2026
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
error: Content is protected !!