22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya
error: Content is protected !!