23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!