April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ.

ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10 ರಂದು ಸಂಜೆ, ಮಹಮ್ಮದ್ ರವರ ಬಾಬ್ತು KA 70-5972 ನೇ ಆಟೋ ರಿಕ್ಷಾದಲ್ಲಿ ಸಹ ಪ್ರಯಾಣಿಕರನ್ನಾಗಿ, ಸಲೀಂ ಹಾಗೂ ಅವರ ಮಕ್ಕಳಾದ ಮೊಹಮ್ಮದ್‌ ಶಯಾನ್‌(8), ರಿಫ್ನಾ (6) ಎಂಬವರನ್ನು ಕುಳ್ಳಿರಿಸಿಕೊಂಡು, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಾಯಿಸಿಕೊಂಡು ಬರುತ್ತಾ, ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ ತಲುಪುತ್ತಿದ್ದಂತೆ, ಮಹಮ್ಮದ್ ವಿರುದ್ದ ದಿಕ್ಕಿನಿಂದ KA 18 Z 3143 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ, ಮಹಮ್ಮದ್ ರವರ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಮಹಮ್ಮದ್, ಸಲೀಂರವರಿಗೆ, ಮಗು ಮೊಹಮ್ಮದ್‌ ಶಯಾನ್‌ ರವರುಗಳಿಗೆ ಗಾಯಗಳಾಗಿರುತ್ತದೆ.

ಗಾಯಾಳುಗಳು ಗುರುವಾಯನಕೆರೆ ಆಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ, ಈ ಪೈಕಿ ಗಾಯಾಳು ಮೊಹಮ್ಮದ್‌ ಶಯಾನ್‌ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya
error: Content is protected !!