24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಹೆರಾಜೆ ಕುಟುಂಬದ ಹಿರಿಯ ಸದಸ್ಯ ಲಾಯಿಲದ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶೇಖರ ಬಂಗೇರರ ಗೌರವಾರ್ಥವಾಗಿ ನುಡಿ ನಮನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನಡೆಯಿತು.


ಕ್ಷೇತ್ರದ ಗೌರವ ಮಾರ್ಗದರ್ಶಕರಾದ ಬಿಎ ಕುಮಾರ ಹೆಗ್ಡೆಯವರು ತಮ್ಮ ಅನಿಸಿಕೆಯಲ್ಲಿ ಶೇಖರ ಬಂಗೇರರು ಒಬ್ಬ ನಿಸ್ವಾರ್ಥ ಮನೋಭಾವದ ಸರಳ ಸಜ್ಜನಿಕೆಯ ನಿರಾಡಂಬರ ವ್ಯಕ್ತಿಯಾಗಿದ್ದು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಯರ ರಾಯಭಾರಿಯಾಗಿ ಗುರುಗಳ ವಾರದಂದು ರಾಯರ ಪಾದ ಸೇರಿದರು. ವಿಜಯ ಬ್ಯಾಂಕಿನ ಹಿರಿಯ ನಿವೃತ್ತ ಮ್ಯಾನೇಜರ್ ಆಗಿದ್ದು ಹಣಕಾಸಿನ ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಮುಖಾಂತರ ಮಠದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು.

ಕ್ಷೇತ್ರದ ಗೌರವ ಸಲಹೆಗಾರ ಮಂಜುನಾಥ ರೈ, ಕೋಶಾಧಿಕಾರಿ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶ್ರೀ ಶಂಕರ ಹೆಗ್ಡೆ, ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವ ಸಲಹೆಗಾರ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಟ್ರಸ್ಟಿಗಳಾದ ಶ್ರವಣ್ ರಾಜ್, ನಿಖಿಲ್ ಪೈ, ಜಯರಾಮ ಬಂಗೇರ ಹೆರಾಜೆ, ಉಮೇಶ್ ಬಂಗೇರ, ವಿಜಯ ಸಾಲಿಯಾನ್, ಶ್ರೀಮತಿ ಲತಾ ಶಿವರಾಮ್, ಕೃಷ್ಣ ಶೆಟ್ಟಿ, ಆನಂದ ಶೆಟ್ಟಿ, ಉದಯ, ಅಶೋಕ ಶೆಟ್ಟಿ, ರಾಘವೇಂದ್ರ ನಗರದ ಪ್ರದೀಪ್ ಜಿ ಎಸ್, ಜಯಂತ ಬಂಗಾರು, ಶೇಖರ ಬಂಗೇರ ಪುತ್ರಿಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!