37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಹೆರಾಜೆ ಕುಟುಂಬದ ಹಿರಿಯ ಸದಸ್ಯ ಲಾಯಿಲದ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶೇಖರ ಬಂಗೇರರ ಗೌರವಾರ್ಥವಾಗಿ ನುಡಿ ನಮನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನಡೆಯಿತು.


ಕ್ಷೇತ್ರದ ಗೌರವ ಮಾರ್ಗದರ್ಶಕರಾದ ಬಿಎ ಕುಮಾರ ಹೆಗ್ಡೆಯವರು ತಮ್ಮ ಅನಿಸಿಕೆಯಲ್ಲಿ ಶೇಖರ ಬಂಗೇರರು ಒಬ್ಬ ನಿಸ್ವಾರ್ಥ ಮನೋಭಾವದ ಸರಳ ಸಜ್ಜನಿಕೆಯ ನಿರಾಡಂಬರ ವ್ಯಕ್ತಿಯಾಗಿದ್ದು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಯರ ರಾಯಭಾರಿಯಾಗಿ ಗುರುಗಳ ವಾರದಂದು ರಾಯರ ಪಾದ ಸೇರಿದರು. ವಿಜಯ ಬ್ಯಾಂಕಿನ ಹಿರಿಯ ನಿವೃತ್ತ ಮ್ಯಾನೇಜರ್ ಆಗಿದ್ದು ಹಣಕಾಸಿನ ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಮುಖಾಂತರ ಮಠದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು.

ಕ್ಷೇತ್ರದ ಗೌರವ ಸಲಹೆಗಾರ ಮಂಜುನಾಥ ರೈ, ಕೋಶಾಧಿಕಾರಿ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶ್ರೀ ಶಂಕರ ಹೆಗ್ಡೆ, ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವ ಸಲಹೆಗಾರ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಟ್ರಸ್ಟಿಗಳಾದ ಶ್ರವಣ್ ರಾಜ್, ನಿಖಿಲ್ ಪೈ, ಜಯರಾಮ ಬಂಗೇರ ಹೆರಾಜೆ, ಉಮೇಶ್ ಬಂಗೇರ, ವಿಜಯ ಸಾಲಿಯಾನ್, ಶ್ರೀಮತಿ ಲತಾ ಶಿವರಾಮ್, ಕೃಷ್ಣ ಶೆಟ್ಟಿ, ಆನಂದ ಶೆಟ್ಟಿ, ಉದಯ, ಅಶೋಕ ಶೆಟ್ಟಿ, ರಾಘವೇಂದ್ರ ನಗರದ ಪ್ರದೀಪ್ ಜಿ ಎಸ್, ಜಯಂತ ಬಂಗಾರು, ಶೇಖರ ಬಂಗೇರ ಪುತ್ರಿಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya
error: Content is protected !!