25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಹೆರಾಜೆ ಕುಟುಂಬದ ಹಿರಿಯ ಸದಸ್ಯ ಲಾಯಿಲದ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶೇಖರ ಬಂಗೇರರ ಗೌರವಾರ್ಥವಾಗಿ ನುಡಿ ನಮನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನಡೆಯಿತು.


ಕ್ಷೇತ್ರದ ಗೌರವ ಮಾರ್ಗದರ್ಶಕರಾದ ಬಿಎ ಕುಮಾರ ಹೆಗ್ಡೆಯವರು ತಮ್ಮ ಅನಿಸಿಕೆಯಲ್ಲಿ ಶೇಖರ ಬಂಗೇರರು ಒಬ್ಬ ನಿಸ್ವಾರ್ಥ ಮನೋಭಾವದ ಸರಳ ಸಜ್ಜನಿಕೆಯ ನಿರಾಡಂಬರ ವ್ಯಕ್ತಿಯಾಗಿದ್ದು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಯರ ರಾಯಭಾರಿಯಾಗಿ ಗುರುಗಳ ವಾರದಂದು ರಾಯರ ಪಾದ ಸೇರಿದರು. ವಿಜಯ ಬ್ಯಾಂಕಿನ ಹಿರಿಯ ನಿವೃತ್ತ ಮ್ಯಾನೇಜರ್ ಆಗಿದ್ದು ಹಣಕಾಸಿನ ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಮುಖಾಂತರ ಮಠದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು.

ಕ್ಷೇತ್ರದ ಗೌರವ ಸಲಹೆಗಾರ ಮಂಜುನಾಥ ರೈ, ಕೋಶಾಧಿಕಾರಿ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶ್ರೀ ಶಂಕರ ಹೆಗ್ಡೆ, ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವ ಸಲಹೆಗಾರ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಟ್ರಸ್ಟಿಗಳಾದ ಶ್ರವಣ್ ರಾಜ್, ನಿಖಿಲ್ ಪೈ, ಜಯರಾಮ ಬಂಗೇರ ಹೆರಾಜೆ, ಉಮೇಶ್ ಬಂಗೇರ, ವಿಜಯ ಸಾಲಿಯಾನ್, ಶ್ರೀಮತಿ ಲತಾ ಶಿವರಾಮ್, ಕೃಷ್ಣ ಶೆಟ್ಟಿ, ಆನಂದ ಶೆಟ್ಟಿ, ಉದಯ, ಅಶೋಕ ಶೆಟ್ಟಿ, ರಾಘವೇಂದ್ರ ನಗರದ ಪ್ರದೀಪ್ ಜಿ ಎಸ್, ಜಯಂತ ಬಂಗಾರು, ಶೇಖರ ಬಂಗೇರ ಪುತ್ರಿಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya
error: Content is protected !!