23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಅನುಪ್ರಿಯ 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5 ನೆಯ ಸ್ಥಾನ, ಆಶ್ರಿತ ಜೈನ್ 592 ಅಂಕಗಳೊಂದಿಗೆ ತಾಲೂಕಿಗೆ ದ್ವಿತೀಯ, ರಾಜ್ಯಕ್ಕೆ ಅಂಕಗಳೊಂದಿಗೆ ಏಳನೆಯ ಸ್ಥಾನ, ಧನ್ವಿ ಭಟ್ , ತನ್ಮಯಿ ಶ್ಯಾನುಭಾಗ್ , ಕೃತ್ತಿಕಾ ಸಿ ಬಿ ತಲಾ 591 ಅಂಕಗಳೊಂದಿಗೆ ರಾಜ್ಯಕ್ಕೆ 8 ನೆಯ ಸ್ಥಾನ,ತಾಲೂಕಿಗೆ ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ. ವೈಭವ ಕೆ ಎ, ಸಂಜನಾ ಕೆ ಆರ್ ತಲಾ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೆಯ ಸ್ಥಾನ ಪಡೆದು ಕೊಂಡಿದ್ದಾರೆ.

ಪರೀಕ್ಷೆ ಬರೆದ 455 ವಿದ್ಯಾರ್ಥಿಗಳ ಪೈಕಿ 359 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 96 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಅಪೂರ್ವ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ ಅಭಿರಾಮ್ ಬಿ.ಎಮ್,ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ನಾವೂರು ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ.ಪ್ರದೀಪ್ ನಾವೂರು, ಕಿಟ್ಟೆಲ್ ಕಾಲೇಜಿನ ಪ್ರಾಂಶುಪಾಲ ವಿಠಲ ಅಬೂರ,ತಾಲೂಕಿಗೆ ಪ್ರಥಮ ಹಾಗೂ ದ್ವೀತಿಯ ಸ್ಥಾನಿಯಾದ ಅನುಪ್ರಿಯಾ, ಆಶಿತಾ ಜೈನ್ ಹೆತ್ತವರಾದ ಶ್ರೀಮತಿ ಮತ್ತು ಚಂದ್ರಶೇಖರ್ ಪಿ.ಕೆ ಬಳಂಜ, ಶ್ರೀಮತಿ ಮತ್ತು ಅಜಿತ್ ಕುಮಾರ್ ಕೊಕ್ರಾಡಿ ಉಪಸ್ಥಿತರಿದ್ದರು.

Related posts

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya
error: Content is protected !!