25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

ಗೇರುಕಟ್ಟೆ ಸಮೀಪದ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬದ ಸಾಮೂಹಿಕ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ಭಾಷಣ ಮಾಡಿದರು.

ಖತೀಬರಾದ ತಾಜುದ್ದೀನ್ ಸಖಾಫಿರವರನ್ನು ಬೀಳ್ಕೊಡುಗೆ:

ಕಳೆದ ಮೂರು ವರ್ಷಗಳಿಂದ ಪರಪ್ಪು ಮಸೀದಿಯಲ್ಲಿ ಖತೀಬರಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದ ತಾಜುದ್ದೀನ್ ಸಖಾಫಿ ಮದರಸ ಮಕ್ಕಳ ವಿದ್ಯಾಭ್ಯಾಸದಲ್ಲಿ ರೇಂಜ್ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಫಲಿತಾಂಶ ಬರಲು ಹಾಗೂ ಮದರಸ ಮಕ್ಕಳ ಪ್ರತಿಭೋತ್ಸವದಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆಯಲು ಕೂಡಾ ಕಾರಣಕರ್ತರಾಗಿದ್ದರು.


ಇವರು ಬೇರೆ ಕಡೆ ಉದ್ಯೋಗಕ್ಕಾಗಿ ಹೋಗುವವರಾದ್ದರಿಂದ ಈದುಲ್ ಫಿತರ್ ನ ದಿನದಂದು ಆಡಳಿತ ಸಮಿತಿ ಮತ್ತು ಜಮಾಅತರಿಂದ ಗೌರವಾರ್ಪಣೆಯ ಮೂಲಕ ಬೀಳ್ಕೊಡಲಾಯಿತು.


ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ,ಸಿದ್ದೀಕ್ ಮುಈನಿ, ಅಬ್ಬಾಸ್ ಹಿಶಮಿ,ಇಕ್ಬಾಲ್ ಮರ್ಝಾಕಿ, ಸಿದ್ದೀಕ್ ಸಖಾಫಿ , ಖಾದರ್ ಹಾಜಿ,ಅಬ್ದುಲ್ ಕರೀಮ್, ಖಾದರ್ ಟಿಂಬರ್, ಬಶೀರ್ ಟಿಂಬರ್,ಇಸುಬು ಎಂ.ಕೆ., ಮಹ್ಮದ್ ಎನ್.ಎನ್, ಹಾರಿಶ್ ಎನ್.ಎ, ಅಬ್ಬಾಸ್, ಬಿ.ಎಂ. ಆದಂ ಹಾಜಿ, ಹನೀಫ್ ಬಿ.ಐ., ಆಸಿಫ್.ಎಸ್.ಯು, ಅಬೂಸಾಲಿಹ್ ,ಸಿದ್ದೀಕ್ , ಸೈಫುಲ್ಲಾ, ಹಾಗೂ ಇನ್ನೂ ಅನೇಕ ಮುಖಂಡರು, ಉಸ್ತಾದರುಗಳು ಮೊದಲಾದವರಿದ್ದರು.

Related posts

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya
error: Content is protected !!