38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳು
ಹರಸಾಹಸ ನಡೆಸುತ್ತಿದ್ದಾರೆ.

ಬಾರಿ ಶೇ.100 ಮತದಾನದ ಗುರಿಯನ್ನು ಇಟ್ಟುಕೊಂಡು ಬೆಳ್ತಂಗಡಿ ತಾಲೂಕಿನ ಸ್ವೀಪ್ ಸಮಿತಿಯು ಸರಕಾರಿ, ಅರೆಸರ್ಕಾರಿ, ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಪೋಸ್ಟರ್ ಅಭಿಯಾನ, ಮತದಾನ ಜಾಗೃತಿ ಕಾರ್ಯಕ್ರಮ ವಿವಿದೆಡೆ ನಡೆಸುತ್ತಿದೆ.
‌ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಶಿಶಿಲ ಶಿಶಿಲೇಶ್ವರ ದೇವಸ್ಥಾನ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ, ಬೆಳ್ತಂಗಡಿ ಬಸ್ ನಿಲ್ದಾಣಗಳಲ್ಲಿ ಭಕ್ತರ ಹಾಗೂ ಪ್ರವಾಸಿಗರಲ್ಲಿ ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್ ಅಳವಡಿಸಲಾಗುತ್ತದೆ. ‘ನಾನು ಮತದಾನ ಮಾಡುವೆ ನೀವು ಮಾಡಿ’ ಎಂದು ಮತದಾರರಿಗೆ ಸಂದೇಶ ಸಾರುವುದು ಸೆಲ್ಪಿ ಪಾಯಿಂಟ್‌ನ ಉದ್ದೇಶವಾಗಿದೆ.
ಸ್ವೀಪ್ ಸಮಿತಿಯ ವೈಜಯಣ್ಣ ಸೇರಿದಂತೆ ತಾಲೂಕು ಪಂಚಾಯತನ ಎಲ್ಲಾ ಸಿಬ್ಬಂದಿಗಳು ಈ ಸೆಲ್ಪಿ ಪಾಯಿಂಟ್ ನಲ್ಲಿ ಸಂಭ್ರಮಿಸಿದರು.

Related posts

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya
error: Content is protected !!