22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ.

ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10 ರಂದು ಸಂಜೆ, ಮಹಮ್ಮದ್ ರವರ ಬಾಬ್ತು KA 70-5972 ನೇ ಆಟೋ ರಿಕ್ಷಾದಲ್ಲಿ ಸಹ ಪ್ರಯಾಣಿಕರನ್ನಾಗಿ, ಸಲೀಂ ಹಾಗೂ ಅವರ ಮಕ್ಕಳಾದ ಮೊಹಮ್ಮದ್‌ ಶಯಾನ್‌(8), ರಿಫ್ನಾ (6) ಎಂಬವರನ್ನು ಕುಳ್ಳಿರಿಸಿಕೊಂಡು, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಾಯಿಸಿಕೊಂಡು ಬರುತ್ತಾ, ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ ತಲುಪುತ್ತಿದ್ದಂತೆ, ಮಹಮ್ಮದ್ ವಿರುದ್ದ ದಿಕ್ಕಿನಿಂದ KA 18 Z 3143 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ, ಮಹಮ್ಮದ್ ರವರ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಮಹಮ್ಮದ್, ಸಲೀಂರವರಿಗೆ, ಮಗು ಮೊಹಮ್ಮದ್‌ ಶಯಾನ್‌ ರವರುಗಳಿಗೆ ಗಾಯಗಳಾಗಿರುತ್ತದೆ.

ಗಾಯಾಳುಗಳು ಗುರುವಾಯನಕೆರೆ ಆಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ, ಈ ಪೈಕಿ ಗಾಯಾಳು ಮೊಹಮ್ಮದ್‌ ಶಯಾನ್‌ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಷರತ್ತುಗೊಳ್ಳಪಟ್ಟು ಮರು ನೋಂದಣಿ ಮಾಡಿಕೊಳ್ಳಲು ಸಂಘ ಸಂಸ್ಥೆಗಳಿಗೆ ಅವಕಾಶ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya
error: Content is protected !!