September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಮಸೀದಿ ಬಳಿ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ.

ಕುವೆಟ್ಟು ನಿವಾಸಿ ಮಹಮ್ಮದ್‌ (63) ಎಂಬವರ ದೂರಿನಂತೆ, ಎ.10 ರಂದು ಸಂಜೆ, ಮಹಮ್ಮದ್ ರವರ ಬಾಬ್ತು KA 70-5972 ನೇ ಆಟೋ ರಿಕ್ಷಾದಲ್ಲಿ ಸಹ ಪ್ರಯಾಣಿಕರನ್ನಾಗಿ, ಸಲೀಂ ಹಾಗೂ ಅವರ ಮಕ್ಕಳಾದ ಮೊಹಮ್ಮದ್‌ ಶಯಾನ್‌(8), ರಿಫ್ನಾ (6) ಎಂಬವರನ್ನು ಕುಳ್ಳಿರಿಸಿಕೊಂಡು, ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಚಲಾಯಿಸಿಕೊಂಡು ಬರುತ್ತಾ, ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ ತಲುಪುತ್ತಿದ್ದಂತೆ, ಮಹಮ್ಮದ್ ವಿರುದ್ದ ದಿಕ್ಕಿನಿಂದ KA 18 Z 3143 ನೇ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿ, ಮಹಮ್ಮದ್ ರವರ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನ ಜಖಂಗೊಂಡು ಮಹಮ್ಮದ್, ಸಲೀಂರವರಿಗೆ, ಮಗು ಮೊಹಮ್ಮದ್‌ ಶಯಾನ್‌ ರವರುಗಳಿಗೆ ಗಾಯಗಳಾಗಿರುತ್ತದೆ.

ಗಾಯಾಳುಗಳು ಗುರುವಾಯನಕೆರೆ ಆಭಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ, ಈ ಪೈಕಿ ಗಾಯಾಳು ಮೊಹಮ್ಮದ್‌ ಶಯಾನ್‌ ರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 42/2024 ಕಲಂ: 279,337 ಭಾ.ದಂ.ಸಂ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
error: Content is protected !!