25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಹೆರಾಜೆ ಕುಟುಂಬದ ಹಿರಿಯ ಸದಸ್ಯ ಲಾಯಿಲದ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶೇಖರ ಬಂಗೇರರ ಗೌರವಾರ್ಥವಾಗಿ ನುಡಿ ನಮನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನಡೆಯಿತು.


ಕ್ಷೇತ್ರದ ಗೌರವ ಮಾರ್ಗದರ್ಶಕರಾದ ಬಿಎ ಕುಮಾರ ಹೆಗ್ಡೆಯವರು ತಮ್ಮ ಅನಿಸಿಕೆಯಲ್ಲಿ ಶೇಖರ ಬಂಗೇರರು ಒಬ್ಬ ನಿಸ್ವಾರ್ಥ ಮನೋಭಾವದ ಸರಳ ಸಜ್ಜನಿಕೆಯ ನಿರಾಡಂಬರ ವ್ಯಕ್ತಿಯಾಗಿದ್ದು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಯರ ರಾಯಭಾರಿಯಾಗಿ ಗುರುಗಳ ವಾರದಂದು ರಾಯರ ಪಾದ ಸೇರಿದರು. ವಿಜಯ ಬ್ಯಾಂಕಿನ ಹಿರಿಯ ನಿವೃತ್ತ ಮ್ಯಾನೇಜರ್ ಆಗಿದ್ದು ಹಣಕಾಸಿನ ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಮುಖಾಂತರ ಮಠದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು.

ಕ್ಷೇತ್ರದ ಗೌರವ ಸಲಹೆಗಾರ ಮಂಜುನಾಥ ರೈ, ಕೋಶಾಧಿಕಾರಿ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶ್ರೀ ಶಂಕರ ಹೆಗ್ಡೆ, ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವ ಸಲಹೆಗಾರ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಟ್ರಸ್ಟಿಗಳಾದ ಶ್ರವಣ್ ರಾಜ್, ನಿಖಿಲ್ ಪೈ, ಜಯರಾಮ ಬಂಗೇರ ಹೆರಾಜೆ, ಉಮೇಶ್ ಬಂಗೇರ, ವಿಜಯ ಸಾಲಿಯಾನ್, ಶ್ರೀಮತಿ ಲತಾ ಶಿವರಾಮ್, ಕೃಷ್ಣ ಶೆಟ್ಟಿ, ಆನಂದ ಶೆಟ್ಟಿ, ಉದಯ, ಅಶೋಕ ಶೆಟ್ಟಿ, ರಾಘವೇಂದ್ರ ನಗರದ ಪ್ರದೀಪ್ ಜಿ ಎಸ್, ಜಯಂತ ಬಂಗಾರು, ಶೇಖರ ಬಂಗೇರ ಪುತ್ರಿಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya
error: Content is protected !!