23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಹೆರಾಜೆ ಕುಟುಂಬದ ಹಿರಿಯ ಸದಸ್ಯ ಲಾಯಿಲದ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶೇಖರ ಬಂಗೇರರ ಗೌರವಾರ್ಥವಾಗಿ ನುಡಿ ನಮನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನಡೆಯಿತು.


ಕ್ಷೇತ್ರದ ಗೌರವ ಮಾರ್ಗದರ್ಶಕರಾದ ಬಿಎ ಕುಮಾರ ಹೆಗ್ಡೆಯವರು ತಮ್ಮ ಅನಿಸಿಕೆಯಲ್ಲಿ ಶೇಖರ ಬಂಗೇರರು ಒಬ್ಬ ನಿಸ್ವಾರ್ಥ ಮನೋಭಾವದ ಸರಳ ಸಜ್ಜನಿಕೆಯ ನಿರಾಡಂಬರ ವ್ಯಕ್ತಿಯಾಗಿದ್ದು ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಯರ ರಾಯಭಾರಿಯಾಗಿ ಗುರುಗಳ ವಾರದಂದು ರಾಯರ ಪಾದ ಸೇರಿದರು. ವಿಜಯ ಬ್ಯಾಂಕಿನ ಹಿರಿಯ ನಿವೃತ್ತ ಮ್ಯಾನೇಜರ್ ಆಗಿದ್ದು ಹಣಕಾಸಿನ ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಮುಖಾಂತರ ಮಠದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು.

ಕ್ಷೇತ್ರದ ಗೌರವ ಸಲಹೆಗಾರ ಮಂಜುನಾಥ ರೈ, ಕೋಶಾಧಿಕಾರಿ ವಸಂತ ಸುವರ್ಣ, ಜೊತೆ ಕಾರ್ಯದರ್ಶಿ ಶ್ರೀ ಶಂಕರ ಹೆಗ್ಡೆ, ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಮುಂತಾದವರು ಮೃತರ ಗುಣಗಾನವನ್ನು ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಗೌರವ ಸಲಹೆಗಾರ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಟ್ರಸ್ಟಿಗಳಾದ ಶ್ರವಣ್ ರಾಜ್, ನಿಖಿಲ್ ಪೈ, ಜಯರಾಮ ಬಂಗೇರ ಹೆರಾಜೆ, ಉಮೇಶ್ ಬಂಗೇರ, ವಿಜಯ ಸಾಲಿಯಾನ್, ಶ್ರೀಮತಿ ಲತಾ ಶಿವರಾಮ್, ಕೃಷ್ಣ ಶೆಟ್ಟಿ, ಆನಂದ ಶೆಟ್ಟಿ, ಉದಯ, ಅಶೋಕ ಶೆಟ್ಟಿ, ರಾಘವೇಂದ್ರ ನಗರದ ಪ್ರದೀಪ್ ಜಿ ಎಸ್, ಜಯಂತ ಬಂಗಾರು, ಶೇಖರ ಬಂಗೇರ ಪುತ್ರಿಯರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya
error: Content is protected !!