ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

ಹೊಸಂಗಡಿ : ಮಂಗಳೂರು ಲೋಕಸಭಾ ಚುನಾವಣಾ 2024 ಪ್ರಯುಕ್ತ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನು ನಾರಾವಿ ಜಿಲ್ಲಾ ಪಂಚಾಯತ್ ನ ಹೊಸಂಗಡಿ ಪ್ರೆಂಡ್ಸ್ ಕ್ಲಬ್ ಸಭಾ ಭವನದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ನ ರವರ ಅಧ್ಯಕ್ಷತೆಯಲ್ಲಿ ಜರಗಿತು. ನಂತರ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಬಡವರ ಮನೆ ಬೆಳಕನ್ನು ಕಂಡಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಹೊರಗೆ ಉಳಿಯಬಾರದು, ವಿಶೇಷವಾಗಿ ಪ್ರತಿ ಮಹಿಳೆಯರಿಗೆ ರೂ. 2000 ಬರಲೇ ಬೇಕು ಒಂದೊಮ್ಮೆ ತಾಂತ್ರಿಕ ದೋಷಗಳಿಂದ ಸಮಸ್ಯೆ ಇದ್ದಲ್ಲಿ ಅದನ್ನು ಸರಿಪಡಿಸುವರೇ ಮಹಿಳೆಯ ವಿವರ ಪಡೆಯಬೇಕೆಂದು ಸೂಚಿಸಿ ಸರ್ವ ಸಮಾಜದ ಪ್ರೀತಿಯ ಯುವಕ ಪದ್ಮರಾಜ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಶೇಖರ್ ಕುಕ್ಕೇಡಿ ಚುನಾವಣಾ ಪ್ರಚಾರ ಹಾಗೂ ಸರಕಾರದ 5 ಗ್ಯಾರಂಟಿಗಳ ಬಗ್ಗೆ ಪ್ರತಿ ಮನೆಗೆ ಹೋಗಿ ವಿಚಾರಿಸಿ ಸಮಸ್ಯೆ ಇದ್ದಲ್ಲಿ ಪರಿಹರಿಸುವ ಮಾಹಿತಿಯನ್ನು ಪಡೆಯಬೇಕೆಂದು ಕರೆ ನೀಡಿ ಎಲ್ಲಾ ಸಮುದಾಯಗಳ ಕಣ್ಮಣಿ ಆರ್ ಪದ್ಮರಾಜ್ ಪೂಜಾರಿಯವರನ್ನು ಅತ್ಯಂತ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಕಾರ್ಯಕರ್ತರು ಶ್ರಮಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ಉಸ್ತುವಾರಿ ಬಾಲಕೃಷ್ಣ ಭಟ್ , ಬ್ಲಾಕ್ ಯುವ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸುದರ್ಶನ್ ಶೆಟ್ಟಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿ, ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿ ಸರಕಾರಿ ನಾಮ ನಿರ್ದೇಶಿತ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ಅಬ್ದುಲ್ ರಹಿಮಾನ್ ಕಟ್ಟೆ , ಅಲಿಯಬ್ಬ ಪುಲಬೆ, ಸುದರ್ಶನ್ ಮಂಜಿಲ ,ಖಾಲಿದ್ ಪುಲಬೆ ,ಪಂಚಾಯತ್ ಸದಸ್ಯೆ ಶ್ರೀಮತಿ ಜೆ ಶಾಂತ ,ಮೊಹಮ್ಮದ್ ಶಾಫಿ ಕಿರೋಡಿ ,ದಿನೇಶ್ ಸಾಲಿಯಾನ್ ,ಭೋಜಶೆಟ್ಟಿ ಬಡಕೋಡಿ , ಗುರು ಬಡಕೋಡಿ , ಪ್ರಶಾಂತ್ ನಾಯ್ಕ್ ಬಡಕೋಡಿ ,ಅಕ್ಕು ,ಜನಾರ್ಧನ್ ಕೊಂಜಾಲಗುರಿ ಸೇರಿದಂತೆ ಕಾರ್ಯಕರ್ತರು ಮುಖಂಡರುಗಳು ಉಪಸ್ಥಿತರಿದ್ದರು.


ಹೊಸಂಗಡಿ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಹರಿಪ್ರಸಾದ್ ಧನ್ಯವಾದವಿತ್ತರು. ಬಡಕೋಡಿಯ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತಾಡಿದರು,

Related posts

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya
error: Content is protected !!