September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

ಬೆಳ್ತಂಗಡಿ: ರೆಖ್ಯ, ಕೊಕ್ಕಡ, ಶಿಶಿಲ, ಕಳೆಂಜ ಈ ರಸ್ತೆಗಳಲ್ಲಿ ಅನೇಕ ಕಡೆ ವೇಗ ನಿಯಂತ್ರಕ ಉಬ್ಬುಗಳಿದ್ದು ಈ ಬಗ್ಗೆ ಯಾವುದೇ ಸೂಚನಾ ಫಲಕಗಳು ಇಲ್ಲದೆ ಇರುವುದರಿಂದ ಅನೇಕ ದ್ವಿಚಕ್ರ ವಾಹನಗಳಿಗೆ ತುಂಬಾ ಅಪಘಾತಗಳು ಆಗುತ್ತಿದ್ದವು. ಇದನ್ನು ಮನಗಂಡ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸೇವಾ ಪ್ರತಿನಿಧಿ ಮತ್ತು ಘಟಕ ಪ್ರತಿನಿಧಿಯವರು, ಶೌರ್ಯ ವಿಪತ್ತು ನಿರ್ವಹಣೆ ಘಟಕದ ಯೋಜನಾಧಿಕಾರಿಯವರಾದ ಜೈವಂತ್ ಪಟ್ಕರ್ ಇವರಲ್ಲಿ ತಿಳಿಸಿದಾಗ ಇವರು ಈ ಕೆಲಸವನ್ನು ಉತ್ತೇಜಿಸಿ ರೆಖ್ಯ, ಕೊಕ್ಕಡ, ಕಳೆಂಜ, ಶಿಶಿಲ ರಸ್ತೆಗಳಲ್ಲಿ ವೇಗ ನಿಯಂತ್ರಣ ಉಬ್ಬುಗಳಿಗೆ ಬಣ್ಣ ಬಳಿದು ಅವುಗಳು ದೂರದಿಂದಲೇ ಸ್ಪಷ್ಟವಾಗಿ ಗೋಚರಿಸುವಂತಹ ಕೆಲಸವನ್ನು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡವು ಮಾಡಿದರು.

ವಿಪತ್ತು ತಂಡದ ಸದಸ್ಯರಾದ ಪ್ರವೀಣ್, ಅವಿನಾಶ್ ಭಿಡೆ, ಸುರೇಶ, ಹರೀಶ್, ಶೀನಪ್ಪ ಆನಂದ, ಚೇತನ್, ರಾಧಾಕೃಷ್ಣ, ರಶ್ಮಿತ ಇವರೊಂದಿಗೆ ಸ್ಥಳೀಯ ಜನಪ್ರತಿನಿಧಿಗಳಾದ ನವೀನ್ ರೆಖ್ಯ ಮತ್ತು ಕರುಣಾಕರ್ ಶಿಶಿಲ ಸಹಕರಿಸಿದ್ದು ಈ ಕೆಲಸಕ್ಕೆ ತಗುಲುವ ಪೇಂಟಿನ ವೆಚ್ಚವನ್ನು ಎಸ್ ಕೆ ಡಿ ಆರ್ ಡಿ ಪಿ ಸಂಸ್ಥೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಬಿ. ಜಯರಾಮ್ ನೆಲ್ಲಿತ್ತಾಯ ಇವರು ಮತ್ತು ಹತ್ಯಡ್ಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಇವರು ಭರಿಸಿರುತ್ತಾರೆ.

Related posts

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya
error: Content is protected !!