ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ವೇಣೂರು: ತಿಮ್ಮಣಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಎ.8 ರಂದು ಜರುಗಿತು.


ಈ ಸಂದರ್ಭ ವಿದ್ಯಾರ್ಥಿಗಳಿಂದ ನಡೆದ ಮೆಟ್ರಿಕ್ ಮೇಳಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದರವರು ಚಾಲನೆ ನೀಡಿದರು.
ಮಕ್ಕಳು ವ್ಯಾಪಾರ ಕೇಂದ್ರದಲ್ಲಿ ವಿವಿಧ ಬಗೆಯ ತರಕಾರಿ, ಹಣ್ಣುಹಂಪಲು ಇತ್ಯಾದಿಗಳಿಂದ ವ್ಯಾಪಾರದ ಬಗ್ಗೆ ತಿಳುವಳಿಕೆ ಪಡೆದು ಯಶಸ್ವಿಯಾಗಿ ನಡೆಸಿಕೊಟ್ಟರು.


ಈ ಸಂದರ್ಭ ಶಾಲಾ ಎಸ್‌ಡಿಎಂಸಿ ಸಮಿತಿ ಅಧ್ಯಕ್ಷ ರಾಜು ನಾಯ್ಕ್, ಮತ್ತು ಪೋಷಕರು, ಎಲ್ಲಾ ಶಿಕ್ಷಕವೃಂದದವರು ಭಾಗವಹಿಸಿದ್ದರು.

Leave a Comment

error: Content is protected !!