23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

ಬೆಳ್ತಂಗಡಿ: ರೆಖ್ಯ, ಕೊಕ್ಕಡ, ಶಿಶಿಲ, ಕಳೆಂಜ ಈ ರಸ್ತೆಗಳಲ್ಲಿ ಅನೇಕ ಕಡೆ ವೇಗ ನಿಯಂತ್ರಕ ಉಬ್ಬುಗಳಿದ್ದು ಈ ಬಗ್ಗೆ ಯಾವುದೇ ಸೂಚನಾ ಫಲಕಗಳು ಇಲ್ಲದೆ ಇರುವುದರಿಂದ ಅನೇಕ ದ್ವಿಚಕ್ರ ವಾಹನಗಳಿಗೆ ತುಂಬಾ ಅಪಘಾತಗಳು ಆಗುತ್ತಿದ್ದವು. ಇದನ್ನು ಮನಗಂಡ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸೇವಾ ಪ್ರತಿನಿಧಿ ಮತ್ತು ಘಟಕ ಪ್ರತಿನಿಧಿಯವರು, ಶೌರ್ಯ ವಿಪತ್ತು ನಿರ್ವಹಣೆ ಘಟಕದ ಯೋಜನಾಧಿಕಾರಿಯವರಾದ ಜೈವಂತ್ ಪಟ್ಕರ್ ಇವರಲ್ಲಿ ತಿಳಿಸಿದಾಗ ಇವರು ಈ ಕೆಲಸವನ್ನು ಉತ್ತೇಜಿಸಿ ರೆಖ್ಯ, ಕೊಕ್ಕಡ, ಕಳೆಂಜ, ಶಿಶಿಲ ರಸ್ತೆಗಳಲ್ಲಿ ವೇಗ ನಿಯಂತ್ರಣ ಉಬ್ಬುಗಳಿಗೆ ಬಣ್ಣ ಬಳಿದು ಅವುಗಳು ದೂರದಿಂದಲೇ ಸ್ಪಷ್ಟವಾಗಿ ಗೋಚರಿಸುವಂತಹ ಕೆಲಸವನ್ನು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡವು ಮಾಡಿದರು.

ವಿಪತ್ತು ತಂಡದ ಸದಸ್ಯರಾದ ಪ್ರವೀಣ್, ಅವಿನಾಶ್ ಭಿಡೆ, ಸುರೇಶ, ಹರೀಶ್, ಶೀನಪ್ಪ ಆನಂದ, ಚೇತನ್, ರಾಧಾಕೃಷ್ಣ, ರಶ್ಮಿತ ಇವರೊಂದಿಗೆ ಸ್ಥಳೀಯ ಜನಪ್ರತಿನಿಧಿಗಳಾದ ನವೀನ್ ರೆಖ್ಯ ಮತ್ತು ಕರುಣಾಕರ್ ಶಿಶಿಲ ಸಹಕರಿಸಿದ್ದು ಈ ಕೆಲಸಕ್ಕೆ ತಗುಲುವ ಪೇಂಟಿನ ವೆಚ್ಚವನ್ನು ಎಸ್ ಕೆ ಡಿ ಆರ್ ಡಿ ಪಿ ಸಂಸ್ಥೆಯ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಬಿ. ಜಯರಾಮ್ ನೆಲ್ಲಿತ್ತಾಯ ಇವರು ಮತ್ತು ಹತ್ಯಡ್ಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ ಇವರು ಭರಿಸಿರುತ್ತಾರೆ.

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!