26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

ಹೊಸಂಗಡಿ : ಮಂಗಳೂರು ಲೋಕಸಭಾ ಚುನಾವಣಾ 2024 ಪ್ರಯುಕ್ತ ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನು ನಾರಾವಿ ಜಿಲ್ಲಾ ಪಂಚಾಯತ್ ನ ಹೊಸಂಗಡಿ ಪ್ರೆಂಡ್ಸ್ ಕ್ಲಬ್ ಸಭಾ ಭವನದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ನ ರವರ ಅಧ್ಯಕ್ಷತೆಯಲ್ಲಿ ಜರಗಿತು. ನಂತರ ಮಾತಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಬಡವರ ಮನೆ ಬೆಳಕನ್ನು ಕಂಡಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಹೊರಗೆ ಉಳಿಯಬಾರದು, ವಿಶೇಷವಾಗಿ ಪ್ರತಿ ಮಹಿಳೆಯರಿಗೆ ರೂ. 2000 ಬರಲೇ ಬೇಕು ಒಂದೊಮ್ಮೆ ತಾಂತ್ರಿಕ ದೋಷಗಳಿಂದ ಸಮಸ್ಯೆ ಇದ್ದಲ್ಲಿ ಅದನ್ನು ಸರಿಪಡಿಸುವರೇ ಮಹಿಳೆಯ ವಿವರ ಪಡೆಯಬೇಕೆಂದು ಸೂಚಿಸಿ ಸರ್ವ ಸಮಾಜದ ಪ್ರೀತಿಯ ಯುವಕ ಪದ್ಮರಾಜ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಶೇಖರ್ ಕುಕ್ಕೇಡಿ ಚುನಾವಣಾ ಪ್ರಚಾರ ಹಾಗೂ ಸರಕಾರದ 5 ಗ್ಯಾರಂಟಿಗಳ ಬಗ್ಗೆ ಪ್ರತಿ ಮನೆಗೆ ಹೋಗಿ ವಿಚಾರಿಸಿ ಸಮಸ್ಯೆ ಇದ್ದಲ್ಲಿ ಪರಿಹರಿಸುವ ಮಾಹಿತಿಯನ್ನು ಪಡೆಯಬೇಕೆಂದು ಕರೆ ನೀಡಿ ಎಲ್ಲಾ ಸಮುದಾಯಗಳ ಕಣ್ಮಣಿ ಆರ್ ಪದ್ಮರಾಜ್ ಪೂಜಾರಿಯವರನ್ನು ಅತ್ಯಂತ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಕಾರ್ಯಕರ್ತರು ಶ್ರಮಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ಉಸ್ತುವಾರಿ ಬಾಲಕೃಷ್ಣ ಭಟ್ , ಬ್ಲಾಕ್ ಯುವ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸುದರ್ಶನ್ ಶೆಟ್ಟಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿ, ಬೆಳ್ತಂಗಡಿ ತಾಲೂಕು ಭೂನ್ಯಾಯ ಮಂಡಳಿ ಸರಕಾರಿ ನಾಮ ನಿರ್ದೇಶಿತ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ಅಬ್ದುಲ್ ರಹಿಮಾನ್ ಕಟ್ಟೆ , ಅಲಿಯಬ್ಬ ಪುಲಬೆ, ಸುದರ್ಶನ್ ಮಂಜಿಲ ,ಖಾಲಿದ್ ಪುಲಬೆ ,ಪಂಚಾಯತ್ ಸದಸ್ಯೆ ಶ್ರೀಮತಿ ಜೆ ಶಾಂತ ,ಮೊಹಮ್ಮದ್ ಶಾಫಿ ಕಿರೋಡಿ ,ದಿನೇಶ್ ಸಾಲಿಯಾನ್ ,ಭೋಜಶೆಟ್ಟಿ ಬಡಕೋಡಿ , ಗುರು ಬಡಕೋಡಿ , ಪ್ರಶಾಂತ್ ನಾಯ್ಕ್ ಬಡಕೋಡಿ ,ಅಕ್ಕು ,ಜನಾರ್ಧನ್ ಕೊಂಜಾಲಗುರಿ ಸೇರಿದಂತೆ ಕಾರ್ಯಕರ್ತರು ಮುಖಂಡರುಗಳು ಉಪಸ್ಥಿತರಿದ್ದರು.


ಹೊಸಂಗಡಿ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಹರಿಪ್ರಸಾದ್ ಧನ್ಯವಾದವಿತ್ತರು. ಬಡಕೋಡಿಯ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತಾಡಿದರು,

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

Suddi Udaya
error: Content is protected !!