March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!