July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ| ಬಾಲಕೃಷ್ಣ ಶೆಟ್ಟಿ ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ರಕ್ತದಾನದ ಮುಖಾಂತರ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಬಗ್ಗೆ ಹಾಗೂ ಮಧುಮೇಹವನ್ನು ತಡೆಗಟ್ಟುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿಯವರು ವಹಿಸಿ, ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಜೆ ಜೆ ಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ಜೆಸಿ ವಾಣಿಯನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ ಹಾಗೂ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಸದಸ್ಯರಾದ ರಜತ್ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಸದಸ್ಯರಾದ ಅನನ್ಯ ಜೈನ್ ಸಂಯೋಜಿಸಿದರು. ಕಾರ್ಯದರ್ಶಿಗಳಾದ ಅನುದೀಪ್ ಜೈನ್ ರವರ ಧನ್ಯವಾದಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು. ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya
error: Content is protected !!