23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ ಬೆಳಗಿಸುವುದರ ಮೂಲಕ ವಿಷು ಕಣಿ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿ ವಿಷು ಕಣಿ ಹಬ್ಬ ಕೃಷಿ ಪ್ರಧಾನವಾಗಿದ್ದು, ವಿವಿಧ ಕೃಷಿಗಳನ್ನು ತಾಲೂಕಿಗೆ ಪರಿಚಯಿಸಿದ್ದು ಕೇರಳದವರು ಎಂದರು.

ಬರೋಡ ತುಳು ಕೂಟದ ಅಧ್ಯಕ್ಷ, ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ವಿಷು ಕಣಿಯನ್ನು ಉದ್ಘಾಟಿಸಿ ಶುಭ ಕೋರಿದರು.

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ ಮೋಹನ್ ಕುಮಾರ್ ರವರು ತೆಂಗಿನ ಗರಿಯನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ‌ಪರಿಷತ್ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್,ಪ್ರಗತಿ ಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಉಜಿರೆ ಗ್ರಾಮ ಪಂಚಾಯತ್ ಅದ್ಯಕ್ಷೆ ಉಷಾ ಕಾರಂತ್,ಬಿಜೆಪಿ ಬೆಳ್ತಂಗಡಿ ಮಂಡಲ‌ ಅಧ್ಯಕ್ಷ ಶ್ರೀನಿವಾಸ್ ರಾವ್, ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್ ಮುಖ್ಯ‌ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ವಿಷು ಕಣಿ ಆಚರಣಾ ಸಮಿತಿ‌ ಸಂಚಾಲಕರಾದ ಅನಿಲ್ ಕುಮಾರ್ ಶಿಬಾಜೆ ,ಪ್ರಸಾದ್ ಬಿ.ಎಸ್, ಉದ್ಯಮಿ ಬಾಲಕೃಷ್ಣ, ಪ್ರಮುಖರಾದ ದಿವಿನೇಶ್ ಚಾರ್ಮಾಡಿ, ರಿಜೇಶ್ ಜಿ.ಕೆರೆ ಅಖಿಲ್ ತೋಟತ್ತಾಡಿ, ಪ್ರಕಾಶ್ ನೆಕ್ಕರೆ, ರಂಗನಾಥ ಪುದುವೆಟ್ಟು, ಸುರೇಶ್ ಚಾರ್ಮಾಡಿ, ಪ್ರಸಾದ್ ಕೆ.ವಿ ತೋಟತ್ತಾಡಿ, ಪ್ರಕಾಶ್ ಹೊಸಮಠ ಚಾರ್ಮಾಡಿ, ಸುಧೀರ್ ಚಾರ್ಮಾಡಿ ಸಹಕರಿಸಿದರು.

ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣಾ ಸಮಿತಿ ವಿನೂತನವಾಗಿ ಹಬ್ಬವನ್ನು ಆಚರಿಸಲು ನಿರ್ಧರಿಸಿ ವಿಶೇಷ ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಕೇರಳದ ನುರಿತ ಕಲಾವಿದರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.

Related posts

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!