September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

ಧರ್ಮಸ್ಥಳ: ಕನ್ಯಾಡಿ‌ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು.

ಕಳೆದ 24 ವರ್ಷಗಳಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಭಾಗವಹಿಸುತ್ತಿದೆ.

ನಾಡಿನ ಪ್ರಸಿದ್ದ ಕುಣಿತಾ ಭಜನಾ ತಂಡವಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಕುಣಿತಾ ಭಜನೆ ನಡೆಯಿತು. ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕುಣಿತಾ ಭಜನೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಆಧ್ಯಾತ್ಮಿಕ ಜೀವನದ ಬಗ್ಗೆ ಎಲ್ಲಾ ಮಕ್ಕಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ,ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ, ಅಧ್ಯಕ್ಷೆ ಜ್ಯೋತಿ ಪೂಜಾರಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!