ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರು ಬೆಳ್ತಂಗಡಿ ಸಿರೋ ಮಲಬಾರ್ ಬಿಷಪ್ ಹೌಸ್ ಗೆ ಭೇಟಿ ನೀಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಮಾಜಿ ಸಚಿವ ರಮಾನಾಥ್ ರೈ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ,ಗ್ರಾಮೀಣ ಘಟಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯ ಧರಣೇಂದ್ರ ಕುಮಾರ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ , ಭೂ ನ್ಯಾಯಮಂಡಳಿ ಸದಸ್ಯ ಇಸ್ಮಾಯಿಲ್ ಕೆ , ಯುವ ಕಾಂಗ್ರೆಸ್ ಗ್ರಾಮೀಣ ಘಟಕ ಅಧ್ಯಕ್ಷ ಜೈಸನ್ ಪಟ್ಟೆರಿಲ್ ,ಪ್ರಮುಖರಾದ ಹನೀಫ್ ಈಶ್ವರ್ ಭಟ್ ಮಾಯಿಲತ್ತೋಡಿ ಉಜಿರೆ ಸೆಬಾಸ್ಟಿಯನ್ ಪಿಟಿ , ಅನಿಲ್ ಜಾಕೋಬ್ ,ರಾಯ್ ಪುದುವೆಟ್ಟು ,ಪದ್ಮನಾಭ ಸಾಲಿಯಾನ್ , ಬಿಟ್ಟಿ ನಡುಲಿಂ ಉಪಸ್ಥಿತರಿದ್ದರು.

ಕೆ ಎಸ್ ಎಮ್ ಸಿ ಎ ಅಧ್ಯಕ್ಷರು ಸ್ವಾಗತಿಸಿದರು.

Leave a Comment

error: Content is protected !!