23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ನಾರಾವಿ: ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Suddi Udaya
error: Content is protected !!