22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿಯನ್ನು ಮೆಚ್ಚಿ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾದರು ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡರು ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಜಿನ್ನಪ್ಪ ಪೂಜಾರಿಯವರಿಗೆ ಪಕ್ಷದ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಬಳಂಜ ಗ್ರಾ.ಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೇಮಂತ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!