25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಎ.12 ರಂದು ಹಳ್ಳಿ ಸಂತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಉದ್ಘಾಟಿಸಿದರು.

ಹಳ್ಳಿ ಸಂತೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಮಾಡಿದ ವಸ್ತುಗಳು ಹಾಗೂ ಸ್ಥಳೀಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದೊರೆಯುವ ತರಕಾರಿ ಸೊಪ್ಪುಗಳ ತಿಂಡಿ ತಿನಿಸುಗಳ ಮಾರಾಟವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಲ್ಲಿ ಒಂದು ವ್ಯವಹಾರವನ್ನು ನಡೆಸಲು ಬೇಕಾಗುವ ಉದ್ಯಮಶೀಲತ್ವವನ್ನು ಬೆಳೆಸುವ ದೃಷ್ಟಿಯಿಂದ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ಕೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿಯ ನಿಕಟ ಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಟಿ.ಕೆ., ಹಾಗೂ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಇವರು ಸ್ವಾಗತಿಸಿ ಪ್ರೊಫೆಸರ್ ಸುರೇಶ್ ವಿ ವಂದಿಸಿದರು.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!