38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪ ಹೊತ್ತ ವ್ಯಕ್ತಿಯೂ ದೂರುದಾರರ ವಿರುದ್ಧ ಪ್ರತಿದೂರು ನೀಡಿದ ಘಟನೆ ನಡೆದಿದೆ.

ಮಚ್ಚಿನ ನಿವಾಸಿ ಪ್ರತಿಭಾ ಬಿ ರೈ (44) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಸದ್ಗುರು ಹೋಟೆಲಿನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡಿಕೊಂಡಿದ್ದಾಗ, ಆರೋಪಿ ಕೇಶವ ಪೂಜಾರಿ ಎಂಬಾತನು ಹೋಟೆಲಿನ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು, ದೂರುದಾರರ ಹೋಟೆಲಿನಲ್ಲಿ ಕೆಲಸ ಮಾಡುವ ಚಂದ್ರ ಎಂಬವರನ್ನು ಉದ್ದೇಶಿಸಿ, ತನ್ನೊಂದಿಗೆ ಶರಾಬು ಕುಡಿಯಲು ಕರೆದಿರುತ್ತಾನೆ. ಇದಕ್ಕೆ ಆಕ್ಷೇಪಿಸಿದಾಗ, ಆರೋಪಿಯು ಅವಾಚ್ಯ ಶಬ್ದದಿಂದ ಬೈದಿದ್ದಾನೆ. ಈ ಸಂದರ್ಭ ಮಗ ಹೃತಿಕ್ ರೈ ಕೇಶವ ಪೂಜಾರಿ ಬಳಿ ಹೋಗಿ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಬೈಯ್ಯ ಬಾರದೆಂದು ತಿಳಿ ಹೇಳಿ ಮನವೊಲಿಸಲು ಮುಂದಾಗಿದ್ದು ಈ ಸಂದರ್ಭ ಹೃತಿಕ್ ಮೇಲೆ ಕೇಶವ ಪೂಜಾರಿ ಹಲ್ಲೆ ನಡೆಸಿರುತ್ತಾನೆ. ಇದೇ ವೇಳೆ ಗಲಾಟೆ ಬಿಡಿಸಲು ಬಂದ ಹೋಟೆಲಿನ ಕೆಲಸದಾಳು ಚಂದ್ರ ಎಂಬವರಿಗೆ ಕೂಡ ಆತ ಕೈಯಿಂದ ಹಲ್ಲೆಗೈದು ಜೀವ ಬೆದರಿಕೆ ಹಾಕಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶವ ಪೂಜಾರಿ ರವರು ಹೃತಿಕ್ ರೈ ಹಾಗೂ ಚಂದ್ರರವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರತಿದೂರನ್ನು ನೀಡಿದ್ದು, ಈ ಎರಡೂ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ..

Related posts

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
error: Content is protected !!