23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪ ಹೊತ್ತ ವ್ಯಕ್ತಿಯೂ ದೂರುದಾರರ ವಿರುದ್ಧ ಪ್ರತಿದೂರು ನೀಡಿದ ಘಟನೆ ನಡೆದಿದೆ.

ಮಚ್ಚಿನ ನಿವಾಸಿ ಪ್ರತಿಭಾ ಬಿ ರೈ (44) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಸದ್ಗುರು ಹೋಟೆಲಿನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡಿಕೊಂಡಿದ್ದಾಗ, ಆರೋಪಿ ಕೇಶವ ಪೂಜಾರಿ ಎಂಬಾತನು ಹೋಟೆಲಿನ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು, ದೂರುದಾರರ ಹೋಟೆಲಿನಲ್ಲಿ ಕೆಲಸ ಮಾಡುವ ಚಂದ್ರ ಎಂಬವರನ್ನು ಉದ್ದೇಶಿಸಿ, ತನ್ನೊಂದಿಗೆ ಶರಾಬು ಕುಡಿಯಲು ಕರೆದಿರುತ್ತಾನೆ. ಇದಕ್ಕೆ ಆಕ್ಷೇಪಿಸಿದಾಗ, ಆರೋಪಿಯು ಅವಾಚ್ಯ ಶಬ್ದದಿಂದ ಬೈದಿದ್ದಾನೆ. ಈ ಸಂದರ್ಭ ಮಗ ಹೃತಿಕ್ ರೈ ಕೇಶವ ಪೂಜಾರಿ ಬಳಿ ಹೋಗಿ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಬೈಯ್ಯ ಬಾರದೆಂದು ತಿಳಿ ಹೇಳಿ ಮನವೊಲಿಸಲು ಮುಂದಾಗಿದ್ದು ಈ ಸಂದರ್ಭ ಹೃತಿಕ್ ಮೇಲೆ ಕೇಶವ ಪೂಜಾರಿ ಹಲ್ಲೆ ನಡೆಸಿರುತ್ತಾನೆ. ಇದೇ ವೇಳೆ ಗಲಾಟೆ ಬಿಡಿಸಲು ಬಂದ ಹೋಟೆಲಿನ ಕೆಲಸದಾಳು ಚಂದ್ರ ಎಂಬವರಿಗೆ ಕೂಡ ಆತ ಕೈಯಿಂದ ಹಲ್ಲೆಗೈದು ಜೀವ ಬೆದರಿಕೆ ಹಾಕಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶವ ಪೂಜಾರಿ ರವರು ಹೃತಿಕ್ ರೈ ಹಾಗೂ ಚಂದ್ರರವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರತಿದೂರನ್ನು ನೀಡಿದ್ದು, ಈ ಎರಡೂ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ..

Related posts

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya
error: Content is protected !!