22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪ ಹೊತ್ತ ವ್ಯಕ್ತಿಯೂ ದೂರುದಾರರ ವಿರುದ್ಧ ಪ್ರತಿದೂರು ನೀಡಿದ ಘಟನೆ ನಡೆದಿದೆ.

ಮಚ್ಚಿನ ನಿವಾಸಿ ಪ್ರತಿಭಾ ಬಿ ರೈ (44) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಸದ್ಗುರು ಹೋಟೆಲಿನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡಿಕೊಂಡಿದ್ದಾಗ, ಆರೋಪಿ ಕೇಶವ ಪೂಜಾರಿ ಎಂಬಾತನು ಹೋಟೆಲಿನ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು, ದೂರುದಾರರ ಹೋಟೆಲಿನಲ್ಲಿ ಕೆಲಸ ಮಾಡುವ ಚಂದ್ರ ಎಂಬವರನ್ನು ಉದ್ದೇಶಿಸಿ, ತನ್ನೊಂದಿಗೆ ಶರಾಬು ಕುಡಿಯಲು ಕರೆದಿರುತ್ತಾನೆ. ಇದಕ್ಕೆ ಆಕ್ಷೇಪಿಸಿದಾಗ, ಆರೋಪಿಯು ಅವಾಚ್ಯ ಶಬ್ದದಿಂದ ಬೈದಿದ್ದಾನೆ. ಈ ಸಂದರ್ಭ ಮಗ ಹೃತಿಕ್ ರೈ ಕೇಶವ ಪೂಜಾರಿ ಬಳಿ ಹೋಗಿ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಬೈಯ್ಯ ಬಾರದೆಂದು ತಿಳಿ ಹೇಳಿ ಮನವೊಲಿಸಲು ಮುಂದಾಗಿದ್ದು ಈ ಸಂದರ್ಭ ಹೃತಿಕ್ ಮೇಲೆ ಕೇಶವ ಪೂಜಾರಿ ಹಲ್ಲೆ ನಡೆಸಿರುತ್ತಾನೆ. ಇದೇ ವೇಳೆ ಗಲಾಟೆ ಬಿಡಿಸಲು ಬಂದ ಹೋಟೆಲಿನ ಕೆಲಸದಾಳು ಚಂದ್ರ ಎಂಬವರಿಗೆ ಕೂಡ ಆತ ಕೈಯಿಂದ ಹಲ್ಲೆಗೈದು ಜೀವ ಬೆದರಿಕೆ ಹಾಕಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶವ ಪೂಜಾರಿ ರವರು ಹೃತಿಕ್ ರೈ ಹಾಗೂ ಚಂದ್ರರವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರತಿದೂರನ್ನು ನೀಡಿದ್ದು, ಈ ಎರಡೂ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ..

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya
error: Content is protected !!