September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪ ಹೊತ್ತ ವ್ಯಕ್ತಿಯೂ ದೂರುದಾರರ ವಿರುದ್ಧ ಪ್ರತಿದೂರು ನೀಡಿದ ಘಟನೆ ನಡೆದಿದೆ.

ಮಚ್ಚಿನ ನಿವಾಸಿ ಪ್ರತಿಭಾ ಬಿ ರೈ (44) ಎಂಬವರ ದೂರಿನಂತೆ, ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮದ ಸದ್ಗುರು ಹೋಟೆಲಿನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡಿಕೊಂಡಿದ್ದಾಗ, ಆರೋಪಿ ಕೇಶವ ಪೂಜಾರಿ ಎಂಬಾತನು ಹೋಟೆಲಿನ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು, ದೂರುದಾರರ ಹೋಟೆಲಿನಲ್ಲಿ ಕೆಲಸ ಮಾಡುವ ಚಂದ್ರ ಎಂಬವರನ್ನು ಉದ್ದೇಶಿಸಿ, ತನ್ನೊಂದಿಗೆ ಶರಾಬು ಕುಡಿಯಲು ಕರೆದಿರುತ್ತಾನೆ. ಇದಕ್ಕೆ ಆಕ್ಷೇಪಿಸಿದಾಗ, ಆರೋಪಿಯು ಅವಾಚ್ಯ ಶಬ್ದದಿಂದ ಬೈದಿದ್ದಾನೆ. ಈ ಸಂದರ್ಭ ಮಗ ಹೃತಿಕ್ ರೈ ಕೇಶವ ಪೂಜಾರಿ ಬಳಿ ಹೋಗಿ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಬೈಯ್ಯ ಬಾರದೆಂದು ತಿಳಿ ಹೇಳಿ ಮನವೊಲಿಸಲು ಮುಂದಾಗಿದ್ದು ಈ ಸಂದರ್ಭ ಹೃತಿಕ್ ಮೇಲೆ ಕೇಶವ ಪೂಜಾರಿ ಹಲ್ಲೆ ನಡೆಸಿರುತ್ತಾನೆ. ಇದೇ ವೇಳೆ ಗಲಾಟೆ ಬಿಡಿಸಲು ಬಂದ ಹೋಟೆಲಿನ ಕೆಲಸದಾಳು ಚಂದ್ರ ಎಂಬವರಿಗೆ ಕೂಡ ಆತ ಕೈಯಿಂದ ಹಲ್ಲೆಗೈದು ಜೀವ ಬೆದರಿಕೆ ಹಾಕಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶವ ಪೂಜಾರಿ ರವರು ಹೃತಿಕ್ ರೈ ಹಾಗೂ ಚಂದ್ರರವರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರತಿದೂರನ್ನು ನೀಡಿದ್ದು, ಈ ಎರಡೂ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ..

Related posts

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya
error: Content is protected !!