23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

ಧರ್ಮಸ್ಥಳ: ಕನ್ಯಾಡಿ‌ ಶ್ರೀರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 64 ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಭಾಗವಹಿಸಿದರು.

ಕಳೆದ 24 ವರ್ಷಗಳಿಂದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಶ್ರೀರಾಮ ತಾರಕ ಮಂತ್ರ ಸಪ್ತಾಹದಲ್ಲಿ ಭಾಗವಹಿಸುತ್ತಿದೆ.

ನಾಡಿನ ಪ್ರಸಿದ್ದ ಕುಣಿತಾ ಭಜನಾ ತಂಡವಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಕುಣಿತಾ ಭಜನೆ ನಡೆಯಿತು. ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಕುಣಿತಾ ಭಜನೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಆಧ್ಯಾತ್ಮಿಕ ಜೀವನದ ಬಗ್ಗೆ ಎಲ್ಲಾ ಮಕ್ಕಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ,ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ, ಅಧ್ಯಕ್ಷೆ ಜ್ಯೋತಿ ಪೂಜಾರಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya
error: Content is protected !!