23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ| ಬಾಲಕೃಷ್ಣ ಶೆಟ್ಟಿ ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ರಕ್ತದಾನದ ಮುಖಾಂತರ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಬಗ್ಗೆ ಹಾಗೂ ಮಧುಮೇಹವನ್ನು ತಡೆಗಟ್ಟುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿಯವರು ವಹಿಸಿ, ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಜೆ ಜೆ ಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ಜೆಸಿ ವಾಣಿಯನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ ಹಾಗೂ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಸದಸ್ಯರಾದ ರಜತ್ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಸದಸ್ಯರಾದ ಅನನ್ಯ ಜೈನ್ ಸಂಯೋಜಿಸಿದರು. ಕಾರ್ಯದರ್ಶಿಗಳಾದ ಅನುದೀಪ್ ಜೈನ್ ರವರ ಧನ್ಯವಾದಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು. ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!