24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ| ಬಾಲಕೃಷ್ಣ ಶೆಟ್ಟಿ ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ರಕ್ತದಾನದ ಮುಖಾಂತರ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಬಗ್ಗೆ ಹಾಗೂ ಮಧುಮೇಹವನ್ನು ತಡೆಗಟ್ಟುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿಯವರು ವಹಿಸಿ, ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಜೆ ಜೆ ಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ಜೆಸಿ ವಾಣಿಯನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ ಹಾಗೂ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಸದಸ್ಯರಾದ ರಜತ್ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಸದಸ್ಯರಾದ ಅನನ್ಯ ಜೈನ್ ಸಂಯೋಜಿಸಿದರು. ಕಾರ್ಯದರ್ಶಿಗಳಾದ ಅನುದೀಪ್ ಜೈನ್ ರವರ ಧನ್ಯವಾದಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು. ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!