July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ| ಬಾಲಕೃಷ್ಣ ಶೆಟ್ಟಿ ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ರಕ್ತದಾನದ ಮುಖಾಂತರ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಬಗ್ಗೆ ಹಾಗೂ ಮಧುಮೇಹವನ್ನು ತಡೆಗಟ್ಟುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿಯವರು ವಹಿಸಿ, ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಜೆ ಜೆ ಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ಜೆಸಿ ವಾಣಿಯನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ ಹಾಗೂ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಸದಸ್ಯರಾದ ರಜತ್ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಸದಸ್ಯರಾದ ಅನನ್ಯ ಜೈನ್ ಸಂಯೋಜಿಸಿದರು. ಕಾರ್ಯದರ್ಶಿಗಳಾದ ಅನುದೀಪ್ ಜೈನ್ ರವರ ಧನ್ಯವಾದಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು. ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!