ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ| ಬಾಲಕೃಷ್ಣ ಶೆಟ್ಟಿ ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು. ರಕ್ತದಾನದ ಮುಖಾಂತರ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಬಗ್ಗೆ ಹಾಗೂ ಮಧುಮೇಹವನ್ನು ತಡೆಗಟ್ಟುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿಯವರು ವಹಿಸಿ, ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಜೆ ಜೆ ಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷರಾದ ಶೈಲೇಶ್, ಜೆಸಿ ವಾಣಿಯನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ ಹಾಗೂ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಸದಸ್ಯರಾದ ರಜತ್ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಸದಸ್ಯರಾದ ಅನನ್ಯ ಜೈನ್ ಸಂಯೋಜಿಸಿದರು. ಕಾರ್ಯದರ್ಶಿಗಳಾದ ಅನುದೀಪ್ ಜೈನ್ ರವರ ಧನ್ಯವಾದಗಳೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು. ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನದ ಧಮಾಕ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya
error: Content is protected !!